ನಮ್ಮ ವಾಟ್ಸಾಪ್ ಗುಂಪು ಸೇರಲು ಕ್ಲಿಕ್ ಮಾಡಿ

ಮಂಗಳೂರು ರಾಮಕ್ಷತ್ರಿಯ ಸೇವಾ ಸಂಘದ ವತಿಯಿಂದ ಸೆ.28ರಂದು 'ಅಭಿನಂದನಾ ಸಮಾರಂಭ'

ಮಂಗಳೂರು : ಮಂಗಳೂರು ರಾಮಕ್ಷತ್ರಿಯ ಸೇವಾ ಸಂಘ ವತಿಯಿಂದ “ಅಭಿನಂದನಾ ಸಮಾರಂಭ” ಕಾರ್ಯಕ್ರಮವನ್ನು ಸೆಪ್ಟೆಂಬರ್ 28, ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ಮೋರ್ಗನ್ಸ್ ಗೇಟ್‌ನ ಪಾಲೆಮಾರ್ ಗಾರ್ಡನ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಹಿತಿ ನೀಡಿದರು.

75 ವರ್ಷಗಳ ಸೇವಾ ಪರಂಪರೆಯ ಈ ಸಂಘವು ವೈದ್ಯಕೀಯ ನೆರವು, ವಿದ್ಯಾಧನ, ರಕ್ತದಾನ, ಪ್ರತಿಭಾ ಪುರಸ್ಕಾರ, ಧಾರ್ಮಿಕ-ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಿ ಬರುತ್ತಿದೆ. ಸಮಾಜಮುಖಿ ಕಾರ್ಯಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಈ ಬಾರಿ ಸನ್ಮಾನಿಸಲಾಗುತ್ತಿದೆ.

ಸನ್ಮಾನಿತರು:
♦ಡಾ. ಹೆಚ್. ಪ್ರಭಾಕರ – ಹೃದ್ರೋಗ ತಜ್ಞರು, ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆ
♦ಡಾ. ಸದಾನಂದ ಪೂಜಾರಿ – ಮೂತ್ರರೋಗ ತಜ್ಞರು, ಸರ್ಕಾರಿ ವೆನ್ಲಾಕ್ ಆಸ್ಪತ್ರೆ
♦ಡಾ. ಎಂ. ಅಣ್ಣಯ್ಯ ಕುಲಾಲ್ ಉಳ್ತೂರು – ಡಾ. ಬಿ.ಸಿ.ರಾಯ್ ರಾಷ್ಟ್ರೀಯ ಸಮುದಾಯ ಸೇವಾ ಪುರಸ್ಕೃತರು
♦ಕು. ನಾಗಶ್ರೀ ಗಣೇಶ ಶೇರುಗಾರ್ – ಅಂತಾರಾಷ್ಟ್ರೀಯ ವೈಟ್ ಲಿಫ್ಟಿಂಗ್ ಮತ್ತು ಪವರ್ ಲಿಫ್ಟಿಂಗ್ ಕ್ರೀಡಾಪಟು

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ದಿವ್ಯ ಉಪಸ್ಥಿತಿ ನೀಡಿ ಆಶೀರ್ವಚನ ನೀಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆ. ಕೃಷ್ಣ ಪಾಲೆಮಾರ್ ವಹಿಸಲಿದ್ದು, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಡಾ. ಶಾಂತರಾಮ ಶೆಟ್ಟಿ, ಶಾಸಕರು ಡಿ. ವೇದವ್ಯಾಸ ಕಾಮತ್ ಮತ್ತು ಉಮಾನಾಥ ಕೋಟ್ಯಾನ್ ಪ್ರಮುಖ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ವಿಶೇಷ ಆಕರ್ಷಣೆಯಾಗಿ ಬೆಳಗ್ಗೆ 9ರಿಂದ 10ರವರೆಗೆ “ಯಕ್ಷ ತೆಲಿಕೆ” ಹಾಸ್ಯಯಕ್ಷಗಾನ ಮತ್ತು ಡಾ. ಶಿವಾನಂದ ಬೇಕಲ್ ಅವರ ಒಗಟಿನ ಮನೆ ಕೃತಿ ಬಿಡುಗಡೆ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಸಂಘದ ಗೌರವಾಧ್ಯಕ್ಷ ರವೀಂದ್ರ ಕೆ., ಅಧ್ಯಕ್ಷ ಮುರಳಿ, ಕಾರ್ಯದರ್ಶಿ ರವೀಂದ್ರ, ಕೋಶಾಧಿಕಾರಿ ದಿನೇಶ್ ಕುಮಾರ್ ಬೇಕಲ್ ಉಪಸ್ಥಿತರಿದ್ದರು.
Previous Post Next Post