ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 27ರಂದು ನಡೆದ ಖಾಸಗಿ ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಉಡುಪಿಯ ಮಿಷನ್ ಕಾಂಪೌಂಡ್ ನಿವಾಸಿ ಮೊಹಮ್ಮದ್ ಫೈಸಲ್ ಖಾನ್ (27), ಕುಂಜಿಬೆಟ್ಟು ಕರಂಬಳ್ಳಿ ನಿವಾಸಿ ಮೊಹಮ್ಮದ್ ಶರೀಫ್ (37) ಹಾಗೂ ಕಾಟಿಪಳ್ಳ ನಿವಾಸಿ ಅಬ್ದುಲ್ ಶುಕೂರ್ (43) ಎಂದು ಗುರುತಿಸಲಾಗಿದೆ.
ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಉಡುಪಿ ಉಪವಿಭಾಗದ ಡಿವೈಎಸ್ಪಿ ಡಿ.ಟಿ. ಪ್ರಭು ಅವರ ಮಾರ್ಗದರ್ಶನದಲ್ಲಿ, ಮಲ್ಪೆ ವೃತ್ತ ನಿರೀಕ್ಷಕ ರಾಮಚಂದ್ರ ನಾಯಕ್ ನೇತೃತ್ವದಲ್ಲಿ, ಪಿಎಸ್ಐ ಅನಿಲ್ ಕುಮಾರ್ ಡಿ ಹಾಗೂ ಮಲ್ಪೆ ಠಾಣೆಯ ಸಿಬ್ಬಂದಿಗಳ ತಂಡವು ಸಕ್ರಿಯ ಕಾರ್ಯಾಚರಣೆ ನಡೆಸಿ ಈ ಬಂಧನಗಳನ್ನು ಕೈಗೊಂಡಿದೆ.