Top News

ಅ.10ರಂದು ಬಿ.ಸಿ.ರೋಡಿನಲ್ಲಿ ಬಂಟ್ವಾಳ ಯೂತ್ ಕಾಂಗ್ರೆಸ್‌ನಿಂದ ಬೃಹತ್ ಪಂಜಿನ ಮೆರವಣಿಗೆ ; ಬಿ.ರಮಾನಾಥ ರೈ ನೇತೃತ್ವ

ಯುವ ಕಾಂಗ್ರೆಸ್ ಬಂಟ್ವಾಳ ವತಿಯಿಂದ ಮತಗಳ್ಳತನ ವಿರುದ್ಧ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಬೃಹತ್ ಪಂಜಿನ ಮೆರವಣಿಗೆ ಅ.10ರಂದು ಸಂಜೆ 5.30ಕ್ಕೆ ಬಿ.ಸಿ.ರೋಡ್ ಕೈಕಂಬ ಪೊಳಲಿ ದ್ವಾರ ವೃತ್ತದಿಂದ ನಾರಾಯಣ ಗುರು ಸರ್ಕಲ್‌ವರೆಗೆ ನಡೆಯಲಿದೆ ಬಳಿಕ ಬಿ.ಸಿ.ರೋಡ್ ಮಿನಿ ವಿಧಾನ ಸೌಧದ ಎದುರುಗಡೆ ಸಾರ್ವಜನಿಕ ಸಭೆ ನಡೆಯಲಿದೆ.

ಮಾಜಿ ಸಚಿವರಾದ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ಈ ಮೆರವಣಿಗೆ ಹಾಗೂ ಸಭೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷದ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Post a Comment

Previous Post Next Post