ಮಂಗಳೂರು: ತುಳು ನಾಟಕ ಕಲಾವಿದರ ಒಕ್ಕೂಟ (ರಿ.), ಮಂಗಳೂರು ಘಟಕದ 2024–25ನೇ ಸಾಲಿನ ವಾರ್ಷಿಕ ಮಹಾಸಭೆ ಕದ್ರಿ ಪಾರ್ಕ್ ಬಳಿಯ ಲಯನ್ಸ್ ಅಶೋಕ್ ಸೇವಾಭವನದಲ್ಲಿ ಲ.ಕಿಶೋರ್ ಡಿ.ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ್ ಕುಮಾರ್ ಮಲ್ಲೂರು ಸ್ವಾಗತಿಸಿ, ವಾರ್ಷಿಕ ವರದಿ ಹಾಗೂ ಪರಿಶೋಧಿತ ಲೆಕ್ಕಪತ್ರಗಳನ್ನು ಮಂಡಿಸಿದರು.
ಸಭೆಯಲ್ಲಿ ಮುಂದಿನ ಎರಡು ವರ್ಷಗಳ ಅವಧಿಗೆ ಲ. ಕಿಶೋರ್ ಡಿ. ಶೆಟ್ಟಿ ಅವರನ್ನು ಸರ್ವಾನುಮತದಿಂದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರಾಗಿ ಗೋಕುಲ್ ಕದ್ರಿ, ತಾರಾನಾಥ್ ಶೆಟ್ಟಿ ಬೋಳಾರ, ಪ್ರಧಾನ ಕಾರ್ಯದರ್ಶಿಯಾಗಿ ಲಕ್ಷ್ಮಣ್ ಕುಮಾರ್ ಮಲ್ಲೂರು;
ಕೋಶಾಧಿಕಾರಿಯಾಗಿ ಮೋಹನ ಕೊಪ್ಪಳ ಕದ್ರಿ, ಕ್ಷೇಮನಿಧಿ ಪ್ರಧಾನ ಸಂಚಾಲಕರಾಗಿ ಪ್ರದೀಪ್ ಆಳ್ವ ಕದ್ರಿ, ಕ್ಷೇಮನಿಧಿ ಸಂಚಾಲಕರಾಗಿ ರಾಘವೇಂದ್ರ ರಾವ್ ಶರವು, ಜೊತೆ ಕಾರ್ಯದರ್ಶಿಯಾಗಿ ತುಳಸೀದಾಸ್ ಉರ್ವ, ಸಂಘಟನಾ ಕಾರ್ಯದರ್ಶಿಯಾಗಿ ಮಧು ಬಂಗೇರ, ಪ್ರಚಾರ ನಿರ್ದೇಶಕರಾಗಿ ರತ್ನದೇವ್ ಪುಂಜಾಲಕಟ್ಟೆ. ಸಲಹಾ ಸಮಿತಿ ಸದಸ್ಯರಾಗಿ ತಮ್ಮ ಲಕ್ಷ್ಮಣ್, ಶೋಭಾ ಶೆಟ್ಟಿ, ಶರತ್ ಶೆಟ್ಟಿ ಮುಂಡ್ಕೂರು ಆಯ್ಕೆಯಾದರು.
ಆಡಳಿತ ಸಮಿತಿ ಸದಸ್ಯರಾಗಿ ಕಿಶೋರ್ ಕುಮಾರ್ ಜೋಗಿ ಉಬಾರ್, ಕಿಶೋರ್ ಡಿ.ಕೆ., ಸುಧಾಕರ ಶೆಟ್ಟಿ ಬೆದ್ರ, ಸಂಜೀವ ಅಡ್ಯಾರ್, ನಾಗೇಶ್ ದೇವಾಡಿಗ ಕದ್ರಿ, ಮೋಹನ್ ಕೆ. ಬೋಳಾರ್, ಅಶ್ವಿನಿ ರೈ, ಕಿಶನ್ ಮಂಗಳಾದೇವಿ, ಹರೀಶ್ ಕೆ. ಶಕ್ತಿನಗರ, ಮನೋಜ್ ಕುಮಾರ್, ನರೇಂದ್ರ ಎಸ್. ಅಂಚನ್, ಸುರೇಶ್ ಬಲ್ಮಠ, ಉದಯರವಿ ಶೆಟ್ಟಿ, ರಾಜಶೇಖರ ಶೆಟ್ಟಿ, ನಿತಿನ್ ಕುಮಾರ್ ಕನೀರ್ತೋಟ, ವಿನಾಯಕ ಜೆಪ್ಪು, ದಿನೇಶ್ ಕುಂಪಲ, ನರೇಂದ್ರ ಕೆರೆಕಾಡು, ತಾರಾನಾಥ್ ಉರ್ವ ಹಾಗೂ ರಂಜನ್ ಬೋಳೂರು ಆಯ್ಕೆಯಾದರು.
ಮೋಹನ ಕೊಪ್ಪಲ ಕದ್ರಿ ಕಾರ್ಯಕ್ರಮ ನಿರ್ವಹಿಸಿದರು. ಪ್ರದೀಪ್ ಆಳ್ವ ಕದ್ರಿ ವಂದಿಸಿದರು.
Post a Comment