ಬಿಸಿಲೆಘಾಟ್ನಲ್ಲಿ ಸಂಭವಿಸಿದ ಅಪಘಾತದ ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ತರಲಾಗಿತ್ತು. ಅಲ್ಲಿನ ವೈದ್ಯರು ತುರ್ತು ಚಿಕಿತ್ಸೆ ನೀಡಿ ಗಂಭೀರ ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕಳುಹಿಸಲು KA-22-C-1382 ಸಂಖ್ಯೆಯ ಅಂಬ್ಯುಲೆನ್ಸ್ನಲ್ಲಿ ಪುತ್ತೂರಿನಿಂದ ಮಂಗಳೂರಿಗೆ ರವಾನಿಸಿದರು.
ಮಧ್ಯಾಹ್ನ ಸುಮಾರು 1.30 ಗಂಟೆಗೆ ಬಂಟ್ವಾಳ ತಾಲೂಕು ಬಿ.ಸಿ.ರೋಡ್ ಎನ್ಜಿ ಸರ್ಕಲ್ ಬಳಿ ಅಂಬ್ಯುಲೆನ್ಸ್ ಸಾಗುತ್ತಿರುವ ವೇಳೆ, KA-19-EK-0696 ಸಂಖ್ಯೆಯ ದ್ವಿಚಕ್ರ ವಾಹನ ಸವಾರ ಅಂಬ್ಯುಲೆನ್ಸ್ನ ಸೈರನ್ ಶಬ್ದ ಕೇಳಿಯೂ ದಾರಿ ಬಿಟ್ಟು ಕೊಡದೆ ಅಂಬ್ಯುಲೆನ್ಸ್ ಸಂಚಾರಕ್ಕೆ ಅಡಚಣೆ ಉಂಟುಮಾಡಿದರು.
ಈ ವಾಹನ ಸವಾರನನ್ನು ಮಹಮ್ಮದ್ ಮನ್ಸೂರ್ (ವಯಸ್ಸು 38), ಬೆಟ್ಟಂಪಾಡಿ ಗ್ರಾಮ, ಪುತ್ತೂರು ತಾಲೂಕು ಮೂಲದವನೆಂದು ಗುರುತಿಸಲಾಗಿದ್ದು, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 128/2025, ಕಲಂ 110, 125 ಬಿ.ಎನ್.ಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
Post a Comment