ಬಂಟ್ವಾಳ: ಪಾಣೆಮಂಗಳೂರು ಪ್ರದೇಶದಲ್ಲಿ ಎರಡು ಬೈಕ್ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವ ಛಾಯಾಗ್ರಾಹಕನೊಬ್ಬ ಸಾವನ್ನಪ್ಪಿದ ದುರ್ಘಟನೆ ನಡೆದಿದೆ.
ಶಂಭೂರು ನಿವಾಸಿಯಾದ ರಕ್ಷಿತ್ ಶೆಟ್ಟಿ (43) ಅಪಘಾತದಲ್ಲಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಪಾಣೆಮಂಗಳೂರು ಬಳಿ ಎರಡು ಬೈಕ್ಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅಪಘಾತದ ಪರಿಣಾಮ ಗಂಭೀರವಾಗಿ ಗಾಯಗೊಂಡ ರಕ್ಷಿತ್ ಶೆಟ್ಟಿಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಕುರಿತು ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Post a Comment