ನೀಟ್-ಯುಜಿ ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ವಿದ್ಯಾರ್ಥಿಗಳು ನಡೆಸಿದ ತೀವ್ರ ಹೋರಾಟಕ್ಕೆ ದೊಡ್ಡ ಜಯ ಸಿಕ್ಕಿದೆ. ಸಿಜೆಪಿ ನೇತೃತ್ವದಲ್ಲಿ ಮುಂದುವರಿದಿದ್ದ ಭಾರೀ ಪ್ರತಿಭಟನೆಯ ಬಿಸಿ ಸರ್ಕಾರದ ಮೇಲೆ ತಟ್ಟಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಭವಿಷ್ಯವನ್ನು ಕಾಪಾಡಲು ಮತ್ತು ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಳ್ಳುವುದನ್ನು ತಡೆಯಲು ತಾನು ಈ ಹೆಜ್ಜೆ ಇರಿಸಿರುವುದಾಗಿ ಪ್ರಧಾನ್ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಮೇ 3 ರಂದು ನಡೆದ ನೀಟ್ ಪರೀಕ್ಷೆಯಲ್ಲಾದ ಅವ್ಯವಸ್ಥೆಗಳ ನೈತಿಕ ಹೊಣೆ ಹೊತ್ತು, ರಾಜೀನಾಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿಕೊಡಲಾಗಿದೆ. ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿರುವ ಈ ಐತಿಹಾಸಿಕ ಬೆಳವಣಿಗೆಯಿಂದ ವಿದ್ಯಾರ್ಥಿ ವಲಯದಲ್ಲಿ ಹರ್ಷ ವ್ಯಕ್ತವಾಗಿದೆ.
Post a Comment